Sunday, December 11, 2016

ವಿಜಯರಾಯರ ಕವಚ - ಸ್ಮರಿಸಿ ಬದುಕಿರೋ


ಸ್ಮರಿಸಿ ಬದುಕಿರೋ ದಿವ್ಯ ಚರಣ ಕೆರಗಿರೋ
ದುರಿತ 
ತೊರಿದು ಪೂರೆವ ವಿಜಯಗುರುಳೆ೦ಬರ IIಪII 

ದಾಸರಾಯನಾ ದಯವ ಸೂಸಿ ಪಡೆದನಾ
ದೋಷ ರಹಿತನಾ ಸಂತೋಷ ಭರಿತನಾ II೧II

ಜ್ಞಾನವ೦ತನಾ ಬಲು ನಿಧಾನಿಶಾ೦ತನಾ
ಮಾನ್ಯವ೦ತನಾ ಬಹುವ ದಾನ್ಯದಾ೦ತನಾ II೨II

ಹರಿಯ ಭಜಿಸುವ ನರಹರಿಯ ಯಜಿಸುವ
ದುರಿತ ತ್ಯಜಿಸುವ ಜನಕೆ ಹರುಷ ಸುರುಸುವ II೩II

ಮೋದ ಭರಿತನಾ ಪಂಚ ಭೇದವರಿತನಾ
ಸಾಧು ಚರಿತನಾ ಮನವಿಷಾದ ಮರೆತನಾ II೪II

ಇವರ ನಂಬಿದ ಜನಕೆ ಭವವಿದೆ೦ಬುದು
ಹವಣವಾಗದೋ ನಮ್ಮವರ ಮತವಿದು II೫II

ಪಾಪಕೋಟಿಯಾ ರಾಶಿ ಲೇಪವಾಗದೋ
ತಾಪಕಳೆವನೋ ಬಲು ದಯಾಪಯೋನಿಧಿ II೬II

ಕವನ ರೂಪದಿ ಹರಿಯಸ್ತವನ ಮಾಡಿದಾ
ಭುವನ ಬೇಡಿದ ಮಾಧವನ ನೋಡಿದಾ II೭II

ರಂಗನೆ೦ದರೆ ಭವವು ಹಿಂಗಿತೆ೦ದನ
ಮಂಗಳಾ೦ಗನಾ ಅಂತರಂಗವರಿತನ II೮II

ಕಾಶಿನಗರದಲ್ಲಿದ್ದ ವ್ಯಾಸದೇವನ ದಯವ
ಸೂಸಿಪಡೆದನಾ ಉಲ್ಲಾಸತನದಲೀ II೯II

ಚಿಂತೆ ಬ್ಯಾಡಿರೋ ನಿಶ್ಚಿ೦ತರಾಗಿರೋ
ಶಾಂತ ಗುರುಗಳಾ ಪಾದವಾ೦ತು ನಂಬಿರೋ II೧೦II

ಖೇದವಾಗದೋ ನಿಮಗೆ ಮೋದ ವಾಹುದೋ
ಆದಿದೇವನಾ ಸುಪ್ರಸಾದ ವಾಹುದೋ II೧೧II

ತಾಪ ತಡೆವನೂ ಬಂದ ಪಾಪ ಕಡಿವನೂ
ಶ್ರೀಪತಿಯ ಪಾದ ಸಮೀಪವಿಡುವನೂ II೧೨II

ಗಂಗೆ ಮಿಂದರೆ ಮಲವು ಹಿ೦ಗಿತಲ್ಲದೆ
ರಂಗ ನೋಲಿಯನೂ ಭಕುತರ ಸಂಗದೊರೆಯದೆ II೧೩II

ವೇದ ಓದ
ಲು ಬರಿದೆ ವಾದಮಾಡಲು
ಹಾದಿಯಾಗದೂ ಬುಧರಪಾದ ನಂಬದೆ II೧೪II

ಲೆಕ್ಕವಿಲ್ಲದಾ ದೇಶ ತುಕ್ಕಿ ಬಂದರೂ
ದುಃಖವಲ್ಲದೆ ಲೇಶ ಭಕುತಿ ದೂರಕದೂ II೧೫II

ದಾನ ಮಾಡ
ಲು ದಿವ್ಯಗಾನ ಪಾಡಲು 
ಜ್ಞಾನ ದೊರೆಯದೋ ಇವರಾಧಿನವಾಗದೇ II೧೬II

ಷ್ಟೆ ಯಾತಕೆ ಕಂಡ ಕಷ್ಟ ವ್ಯಾತಕೆ 
ದಿಟ್ಟ ಗುರುಗಳ ಪಾದ ಮುಟ್ಟಿ ಭಜಿಸಿರೋ II೧೭II 

ಪೂಜೆ ಮಾಡಲೋ ಕಂಡ ಗೋಜು ಬಿಳಲು 
ಬೀಜ ಮಾತಿನ ಫಲ ಸಹಜದೂರಕದೋ II೧೮II 

ಸುರರು ಎಲ್ಲರೊ ಇವರ ಕರವ ಪಿಡಿವರೂ 
ತರಳ ರ೦ದದಿ ಹಿಂದೆ ತಿರುಗುತಿಪ್ಪರು II೧೯II 

ಗ್ರಹಗಳೆಲ್ಲವೂ ಇವಗೆ೯ ಸಹಾಯ ಮಾಡುತಾ 
ಆಹೋ ರಾತ್ರಿಲಿ ಸುಖದ ನಿವಹ ಕೂಡುವವೂ II೨೦II 

ವ್ಯಾಧಿಬಾರದೋ ದೇಹ ಬಾಧೆ ತಟ್ಟದೋ 
ಆದಿದೇವನಾ ಸುಪ್ರಸಾದ ವಾಹುದೋ II೨೧II 

ಪತಿತಪಾಮರಾ ಮಂದಮತಿಯೂ ನಾ ಬಲೂ 
ತುತಿಸಲಾಪೇನೆ ಇವರ ಅತಿಶಯ೦ಗಳಾ II೨೨II 

ಕರುಣದಿ೦ದಲಿ ಎಮ್ಮ ಪೋರೆವನಲ್ಲದೆ 
ದುರಿತ ಕೋಟಿಯಾ ಬೇಗ ತರಿವದಯದಲೀ II೨೩II 

ಮಂದ ಮತಿಗಳು ಇವರ ಚಂದವರಿಯದೇ 
ನಿಂದಿಸುವರು ಭವದ 
ಬಂದ ತಪ್ಪದೋ II೨೪II 

ಇಂದಿರಾಪತಿ ಇವರ ಮು೦ದೆ ಕುಣಿವನೂ 
ಅಂದವಚನವಾ ನಿಜಕೆ ತಂದು ತೋಪ೯ನು II೨೫II 

ಉದಯಕಾಲದಿ ಈ ಪದವ ಪಠಿಸಲೂ 
ಮದಡನಾದರೂ ಜ್ಞಾನ ಉದಯವಾಹುದೋ II೨೬II 

ಸಟೆಯಿದಲ್ಲವೂ ವ್ಯಾಸ ವಿಠಲ ಬಲ್ಲನೊ
ಪಠಿಸಬಹುದಿದೂ ಕೇಳಿ ಕುಟಿಲ ರಹಿತರು II೨೭II 




ಸ್ಮರಿಸಿ ಬದುಕಿರೋ ದಿವ್ಯ ಚರಣ ಕೆರಗಿರೋ
ದುರಿತ 
ತೊರಿದು ಪೂರೆವ ವಿಜಯಗುರುಳೆ೦ಬರ IIಪII